ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರ ಬಂಧನ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆವೊಡ್ಡಿದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಭಾರತೀಯ ಕಿಸಾನ್ ಮಂಚ್ ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಇಮೇಲ್ ಕಳುಹಿಸಿ ಬೆದರಿಕೆ ಹಾಕಿದ್ದರು. ಈ ಘಟನೆ ಸಂಬಂಧಿಸಿ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸೋದಕ್ಕೆ ಮುಂದಾಗಿದ್ದಾರೆ. ಇದೀಗ ಇಮೇಲ್ ಮೂಲಕ ಬೆದರಿಕೆ ವೊಡ್ಡಿದ ಇಬ್ಬರ ಆರೋಪಿಗಳ ಎಸ್ಟಿಎಫ್ ಬಂಧನ ಮಾಡಿದೆ.

ಗೊಂಡಾದ ಕತ್ರಾ ನಿವಾಸಿಗಳಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಎಸ್ಟಿಎಫ್ ಬಂಧಿಸಿದೆ. ಆರೋಪಿಯಿಂದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಮತ್ತು ಸಿಸಿಟಿವಿ ಡಿವಿಆರ್ ವಶಪಡಿಸಿಕೊಳ್ಳಲಾಗಿದೆ ಎಂದು ಇದೀಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here