ಕಾರ್ಯಕ್ರಮದಲ್ಲಿದ್ರೂ ಮೊಬೈಲ್‌ನಲ್ಲಿ ಬ್ಯುಸಿಯಾದ ಕೌರವ..!

ಕೊಪ್ಪಳ : ರಮೇಶ್ ಜರಕಿಹೊಳಿ ವಿರುದ್ಧ ಸಿಡಿ ಬಹಿರಂಗಗೊಂಡ ಬೆನ್ನಲ್ಲೇ , 6 ಜನ ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು, ಮಾಧ್ಯಮಗಳು ತಮ್ಮ ವಿರುದ್ಧ ಪ್ರಸಾರ ಮಾಡದಂತೆ ನ್ಯಾಯಲಯ ಮೆಟ್ಟಿಲೇರಿದ್ದಾರೆ.

ಅದರಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಕೂಡ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭೋತ್ಸವದ ಕಾರ್ಯಕ್ರಮ ನಡೆಯುತ್ತಿದ್ದರು ಕೂಡ, ಬಿಸಿ ಪಾಟೀಲ್ ತಮ್ಮ ಮೊಬೈಲ್‌ನಲ್ಲಿ ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ..

LEAVE A REPLY

Please enter your comment!
Please enter your name here