ಕೋಲ್ಕತ್ತಾ : ಬುರ್ದ್ವಾನ್ ನಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ವಾಹನದ ಎದುರು ಏಕಾಏಕಿ ಕಾರೊಂದು ಬಂದ ಪರಿಣಾಮ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಕಾರಿನ ಹಿಂಬದಿ ಕುಳಿತಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಬುರ್ದ್ವಾನ್ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮುಖ್ಯಮಂತ್ರಿಯ ತಲೆಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಇಂದು ಮಧ್ಯಾಹ್ನ ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಆಡಳಿತಾತ್ಮಕ ಸಭೆಯಿಂದ ಹೊರಟಿದ್ದ ಸಂದರ್ಭ ಮಮತಾ ಬ್ಯಾನರ್ಜಿ ಅವರ ವಾಹನ ಹಠಾತ್ ಬ್ರೇಕ್ ಹಾಕಿದ್ದರಿಂದ ಅವರ ಹಣೆ ಮತ್ತು ತೋಳಿನ ಮೇಲೆ ಸಣ್ಣ ಗಾಯವಾಗಿದೆ. ಬ್ಯಾನರ್ಜಿ ಅವರು ಚಾಲಕನ ಪಕ್ಕದಲ್ಲಿ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರು.